ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದೇನು.

 

 

 

 

ಕಲಬುರಗಿ,ಜ.4- ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆಯಾಗಲಿ, ಪುನಾರಚನೆ ಬಗ್ಗೆಯಾಗಲಿ ಪಕ್ಷದ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದರು.
ರಾಮನಗರದಲ್ಲಿ ನಿನ್ನೆ ನಡೆದ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ, ಸಂಸದ ಡಿ.ಕೆ ಸುರೇಶ್ ಅವರ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ನಮ್ಮ ಸಂಸ್ಕೃತಿಯಲ್ಲ. ಈ ರೀತಿ ನಡೆದುಕೊಳ್ಳುವುದು ತರವಲ್ಲ ಎಂದರು.
ಹೆಚ್‌ಕೆಡಿಬಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಲಾಗುವುದು, ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳನ್ನು ನಿಯೋಜಿಸಿ ೩,೫೦೦ ಕೋಟಿ ರೂ.ಗಳ ಕ್ರಿಯಾಯೋಜನೆಯ ಅನುಷ್ಠಾನಗೊಳಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ೧೫ ಸಾವಿರ ಸರ್ಕಾರಿ ಉದ್ಯೋಗಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ನೀಡಲಾಗಿದೆ. ೫ ಸಾವಿರ ಶಿಕ್ಷಕರೂ ಸೇರಿದಂತೆ ೧೫ ಸಾವಿರ ಹುದ್ದೆಗಳ ನೇಮಕಾತಿ ಆಗಲಿದೆ ಎಂದರು.

 

 

[t4b-ticker]

You May Also Like

More From Author

+ There are no comments

Add yours