ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪಂಚಾಯತಿಯ ನೂತನ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಮೆದೇಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯರಾದ ಆರ್.ನರಸಿಂಹರಾಜು ಅವರಿಗೆ ಹಾಲುಮತ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಮ್ಮೆಹಟ್ಟಿ ಹನುಮಂತಪ್ಪ ಅವರು ಶುಭ ಕೋರಿದರು.
ಚಿತ್ರದುರ್ಗದ ಜಿಪಂ ಕಚೇರಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಕಚೇರಿಯಲ್ಲಿ ಸೋಮವಾರ ಅವರಿಗೆ ಪುಷ್ಪಗುಚ್ಚ ನೀಡಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚನ್ನಬಸಪ್ಪ, ಕ್ರೀಡಾ ಇಲಾಖೆಯ ರವಿಕುಮಾರ್ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.
[t4b-ticker]
+ There are no comments
Add yours