ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ದಿಡೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಸಚಿವರೊಬ್ಬರ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಸಿ.ಸಿ ಪಾಟೀಲ್ ಭಾಗವಹಿಸಿದ್ದರು.
ಈ ಸಭೆಯ ಬೆನ್ನಲ್ಲೆ ಬಸವರಾಜ್ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.ನಿನ್ನೆ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಿಬಿಎಂಪಿ, ಅಧಿಕಾರಿಗಳ ಸಭೆಯಲ್ಲಿ ತಲ್ಲೀನರಾಗಿದ್ದರು. ಇದಾದ ಬಳಿಕ ಕೆಲವು ಸಭೆ ಸಮಾರಂಭಗಳಲ್ಲಿ ಭಾಗವಹಿಸಿದ್ದರು,.ಮುಖ್ಯಮಂತ್ರಿಗಳು ದಿಢೀರ್ ದೆಹಲಿ ಪ್ರವಾಸ ಸಂಪುಟ ಪುನಾರಚನೆಯೋ ಅಥವಾ ರಾಜ್ಯಸಭಾ, ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆಯೋ ಅಥವಾ ಬೇರೆ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆಯೇ ಎಂಬ ಬಗ್ಗೆ ಕುತೂಹಲ ಕೆರಳಿಸಿದೆ.ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳುತ್ತಿದ್ದಾರೆ ಎಂದು ಹೇಳಲಾಗಿದೆಯಾದರೂ ಮೂಲಗಳ ಪ್ರಕಾರ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಈ ಹಿಂದೆ ಈಗಾಗಲೇ ಹಲವು ಬಾರಿ ಮುಖ್ಯಮಂತ್ರಿಗಳು ದೆಹಲಿಯಾತ್ರೆ ಕೈಗೊಂಡಿದ್ದರು. ಪಕ್ಷದ ಮೂಲಗಳ ಪ್ರಕಾರ ಮೇ 24 ರಂದು ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುವ ಸಾಧ್ಯತೆ ಇದೆ ಎಂಬುದು ತಿಳಿದಿದೆಯಾದರೂ ಅಧಿಕೃತವಾಗಿ ಎಲ್ಲಾವೂ ಸಿಎಂ ಬೊಮ್ಮಾಯಿ ಹೇಳಿದರೆ ಮಾತ್ರ ಎಂಬುದು ತಿಳಿದಿದ್ದು ಎಲ್ಲಾವನ್ನು ಸಿಎಂ ದೆಹಲಿಯಿಂದ ಬಂದ ನಂತರ ನಿರ್ಧಾವಾಗಲಿದೆ.
[t4b-ticker]
+ There are no comments
Add yours