ಹಿಂದುಳಿದ ವರ್ಗಗಳ ಹಾಸ್ಟೆಲ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

 

 

 

ಚಿತ್ರದುರ್ಗ,ಫೆಬ್ರವರಿ03:
2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ  ವಿಸ್ತರಿಸಲಾಗಿದೆ.
ಅರ್ಜಿಗಳನ್ನು  www.ssp.postmatric.karnataka.gov.in ಈ ಮೂಲಕ ಸಲ್ಲಿಸಬಹುದು.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in  ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 8050770005/8050770004 ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 080-35254757 ಸಂಪರ್ಕಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours