2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ : ಶಾಸಕ ಪ್ರಿಯಾಂಕ್ ಖರ್ಗೆ ವಿಶ್ವಾಸ

 

 

 

 

ಕಲಬುರಗಿ ಮೇ 14: ರಾಜ್ಯದ ಜನರು ಆಪರೇಷನ್ ಕಮಲ ಹಾಗೂ  ಸಮ್ಮಿಶ್ರ ಸರಕಾರಗಳಕ್ಕೆ  ಜನರು ಬೇಸರಗೊಂಡಿದ್ದು    2023ಕ್ಕೆ  ಜನರು ಖಂಡಿತ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತದೊಂದಿಗೆ  ಅಧಿಕಾರ ನೀಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

 

 

ಇಲ್ಲಿನ ಐವಾನ್-ಇ-ಶಾಹಿ ಅತಿಥಿ ಗೃಹದ ಬಳಿ ತಮ್ಮನ್ನು ಭೇಟಿ  ಮಾಡಿದ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು, ಜನರಿಗೆ ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳ‌ ಕುರಿತು ನಂಬಿಕೆ ಹೊರಟು ಹೋಗಿದೆ. ಇನ್ನೊಂದೆಡೆ ಕಳೆದ 10 ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷ ಅತ್ಯಂತ ಜನಪರವಾದ ಸರಕಾರ ಮತ್ತು ಆಡಳಿತ ನೀಡಿದ್ದನ್ನು ಜನರು ನೋಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನಪ್ರಿಯ ಕಾರ್ಯಕ್ರಮಗಳೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚಿಸಲಿದೆ ಎಂದರು.

[t4b-ticker]

You May Also Like

More From Author

+ There are no comments

Add yours