ಬೆಂಗಳೂರು: ಜಿ.ಪಂ, ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ಪದೇ ಪದೇ ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚು ಮುಂದಕ್ಕೆ ಹೋಗಿಲ್ಲ. ಸರ್ಕಾರದ ಈ ನಡೆ ನ್ಯಾಯಾಲಯದ ಆದೇಶಗಳನ್ನು ನಿಷ್ಕ್ರೀಯಗೊಳಿಸುವಂತಹದ್ದಾಗಿದೆ. ಜ.30ರಗೆ ತಾ.ಪಂ, ಜಿ.ಪಂ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಗಡುವು ನೀಡಿದೆ.
[t4b-ticker]
+ There are no comments
Add yours