ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ 12 ಸಚಿವರ ರಾಜೀನಾಮೆ ಪಡೆದು 43 ನೂತನ ಸಚಿವರನ್ನು ಹೊಸ ಮುಖಕ್ಕೆ ಆದ್ಯತೆ ನೀಡುವ ಮೂಲಕ ಸಂಪುಟ ಪುನಾರಚನೆ ಮಾಡಿದ್ದು, ಹೊಸಬರಿಗೆ ಖಾತೆ ಸಹ ನೀಡಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಕರ್ನಾಟಕದ ನಾಲ್ವರು ನೂತನ ಸಚಿವರಾದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ್ ಖೂಬ ಅವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
ಸಾಮಾಜಿಕ ಸಚಿವಾಲಯದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ರಾಜ್ಯ ಸಚಿವ ಖಾತೆಯನ್ನು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ನೀಡಲಾಗಿದೆ. ಇನ್ನು ಕೌಶಲ್ಯ ಸಚಿವಾಲಯದಲ್ಲಿ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವಾಲಯದ ರಾಜ್ಯ ಸಚಿವ ಸ್ಥಾನವನ್ನು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಗೆ ವಹಿಸಲಾಗಿದೆ.
ಕೃಷಿ ಮತ್ತು ರೈತರ ಕಲ್ಯಾಣದ ರಾಜ್ಯ ಸಚಿವೆ ಸ್ಥಾನವನ್ನು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ವಹಿಸಿದ್ದು, ಹೊಸ ಮತ್ತು ನವೀಕರಿಸಬಹುದಾದ ಶಕ್ತಿ ಹಾಗೂ ರಾಸಾಯನಿಕ ರಸಗೊಬ್ಬರಗಳ ಇಲಾಖೆ ರಾಜ್ಯ ಸಚಿವ ಸ್ಥಾನವನ್ನು ಬೀದರ್ ಸಂಸದ ಭಗವಂತ್ ಖೂಬಗೆ ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
[t4b-ticker]
+ There are no comments
Add yours