ಮಳೆಯ ಆರ್ಭಟಕ್ಕೆ 6 ಜನ ಬಲಿ

 

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಮಳೆ ಸಂಬಂಧಿ ಅವಘಡದಲ್ಲಿ ನಿನ್ನೆ ಒಂದೇ ದಿನ 6 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುದ್ದು, ಶುಕ್ರವಾರ ಮತ್ತೆ 6 ಮಂದಿ ಬಲಿಯಾಗಿದ್ದಾರೆ.

ಈ ಮೂಲಕ ಜುಲೈ ತಿಂಗಳಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಕುಮಟಾ ತಾಲೂಕಿನ ಪೋಸ್ಟ್ ಬೆಟ್ಟುಳ್ಳಿಯಲ್ಲಿ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಬೆಟ್ಟುಳ್ಳಿಯ ಪಾಂಡುರಂಗ ನಾಯ್ಕ್ (38) ಹಾಗೂ ಉಲ್ಲಾಸ ಗಾವಡಿ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ವಿದ್ಯುತ್ ತಂತಿ ತುಳಿದು ಗಂಗಮ್ಮ (67) ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಝರೀನಾ (47), ಉಡುಪಿ ಜಿಲ್ಲೆಯ ಶೆಟ್ಟಬೆಟ್ಟು ನಿವಾಸಿ ರಾಜು ಪಾಣಾರ (47) ಶಾಂಭವಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

[t4b-ticker]

You May Also Like

More From Author

+ There are no comments

Add yours