ಚಳ್ಳಕೆರೆ-16: ವಾಲ್ಮೀಕಿ ಸಮಾಜದ 7.5ಮೀಸಲಾತಿಗಾಗಿ ಕಳೆದ 96 ದಿನಗಳಿಂದ ಬೆಂಗಳೂರು ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ 20. ಚಳ್ಳಕೆರೆ ಬಂದ್ ಗೆ ಬೆಂಬಲಿಸಲು ಎಲ್ಲಾ ಸಂಘ, ಸಂಸ್ಥೆಯಲ್ಲಿ ಮನವಿ ಮಾಡಿದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿ ಮಾತನಾಡಿ,
ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡುವಂತೆ ಮೇ:20 ರಂದು ಬೃಹತ್ ಪ್ರತಿಭಟನೆಯ ಕ್ರಿಯಾಸಮಿತಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಈ ಪ್ರತಿಭಟನೆಗೆ ವಿವಿಧ ಸಂಘಗಳು ಈ ಮೀಸಲಾತಿಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಬೇಕೆಂದು ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬರಲಾಗಿದೆ. ಮೀಸಲಾತಿ ಹೆಚ್ಚಿಸುವುದಾಗಿ ಸರ್ಕಾರ ಭರವಸೆಯನ್ನು ನೀಡುತ್ತಿದೆಯೇ ಹೊರತು ಮೀಸಲಾತಿ ಹೆಚ್ಚಿಸಿಲ್ಲ.
ಮೀಸಲಾತಿ ಹೆಚ್ಚಳ ಮಾಡುವಂತೆ ಬೃಹತ್ ಪ್ರತಿಭಟನೆಯ ಮೂಲಕ ಸರ್ಕಾರವನ್ನು ಒತ್ತಾಯಿಸುವ ಕುರಿತು, ಹೋರಾಟ ನಡೆಸಲಾಗುವುದು ಎಂದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಪಿ. ತಿಪ್ಪೇಸ್ವಾಮಿ, ವಾಲ್ಮೀಕಿ ಕಲ್ಯಾಣ ಮಂಟಪ ವಿದ್ಯಾರ್ಥಿನಿಲಯದ ಅಧ್ಯಕ್ಷ ಮಲ್ಲಪ್ಪ ನಾಯಕ, ನಗರಸಭೆ ಸದಸ್ಯರು, ಸಂಘ ಸಂಸ್ಥೆ ಸದಸ್ಯರು ಹಾಜರಿದ್ದರು.
[t4b-ticker]
+ There are no comments
Add yours