ಭೀಕರ ಅಪಘಾತ ಲಾರಿಯಲ್ಲಿದ್ದ 7 ಹಸುಗಳು ಸಾವು

 

ಕೆ.ಆರ್ ಹಳ್ಳಿ ಗೇಟ್ ಬಳಿ ಲಾರಿಗೆ ಮತ್ತೊಂದು ‌ಲಾರಿ ಡಿಕ್ಕಿ: ಅಕ್ರಮವಾಗಿ ಸಾಗಿಸುತ್ತಿದ್ದ 7 ಗೋವುಗಳು ಸಾವು

ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಕ್ರಮವಾಗಿ ಸಾಗಿಸುತ್ತಿದ್ದ 7 ದನಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ…..

ಮಹಾರಾಷ್ಟ್ರದಿಂದ ಕೋಲಾರದ ಕಡೆಗೆ ಅಕ್ರಮವಾಗಿ ಧನಗಳನ್ನು ಸಾಗಿಸುತ್ತಿದ್ದ ಈಚರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಈಚರ್ ಲಾರಿಯಲ್ಲಿದ್ದ 10 ದನಗಳಲ್ಲಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ……

ಇನ್ನೂ ಈಚರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ. ಲಾರಿಯಲ್ಲಿದ್ದ ಧನಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಇನ್ನೂ ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಬೇಟಿನೀಡಿ ಪರೀಶಿಲನೆ ಕೈಗೊಂಡಿದ್ದಾರೆ…

[t4b-ticker]

You May Also Like

More From Author

+ There are no comments

Add yours