ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 25:
2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಾರ್ಮಿಕರ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲು ಅನುಕೂಲವಾಗುವಂತೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿರುವ ನೊಂದಾಯಿತ ಕಾರ್ಮಿಕರ ಮಕ್ಕಳ ಫಲಾನುಭವಿಯ ಹೆಸರು, ನೊಂದಣಿ ಸಂಖ್ಯೆ, ವ್ಯಾಸಂಗ ಮಾಡಿದ ಶಾಲೆಯ ಹೆಸರು ಮತ್ತು ವಿಳಾಸ, ವಾಸವಿರುವ ಜಿಲ್ಲೆಯ ಮಾಹಿತಿಯನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೀಡಬೇಕಾಗಿರುವ ಹಿನ್ನಲೆಯಲ್ಲಿ ಇದೇ ಮೇ 27 ರೊಳಗಾಗಿ ಹತ್ತಿರದ ಕಾರ್ಮಿಕರ ನಿರೀಕ್ಷಕರ ಕಚೇರಿ, ಕಾರ್ಮಿಕರ ಅಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕೆಂದು ಚಿತ್ರದುರ್ಗ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
[t4b-ticker]
+ There are no comments
Add yours