ರಾಜ್ಯ ವಿಧಾನ ಪರಿಷತ್ ಚುನಾವಣೆ: ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ.

 

 

 

 

ಬೆಂಗಳೂರುಮೇ 27: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 03ರಂದು ನಿಗದಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ವಿಶಾಲಾಕ್ಷಿ ಅವರು ಇಂದು ಘೋಷಿಸಿದರು.

 

 

ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳು ಮಾತ್ರ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ್, ಟಿ. ನಾರಾಯಣ ಸ್ವಾಮಿ, ಹೇಮಾಲತಾ ನಾಯಕ ಹಾಗೂ ಕೇಶವ್ ಪ್ರಸಾದ.ಎಸ್. ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಮ್. ನಾಗರಾಜು. ಜೆಡಿಎಸ್ ಪಕ್ಷದಿಂದ ಶರವಣನ್.ಟಿ ಅವರು ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ.

[t4b-ticker]

You May Also Like

More From Author

+ There are no comments

Add yours