ಚಿತ್ರದುರ್ಗ ಜೂ. ೦೮: ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಕಾಂಗ್ರೆಸ್ಗೆ ಇಡೀ ದೇಶದಲ್ಲಿ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ವಿರೋಧ ಪಕ್ಷವಾಗಿ ಕೆಲಸ ಮಾಡುವ ಶಕ್ತಿ ಸಹ ಅವರಿಗಿಲ್ಲ. ಬರುವ ಚುನಾವಣೆಯಲ್ಲಿ ಜನ ಲಂಗೋಟಿಯನ್ನು ಬಿಚ್ಚಿ ಕಳಿಸ್ತಾರೆ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪರೋಕ್ಷ ಟಾಂಗ್ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಟಾಂಗ್ ನೀಡಿದ ಸಚಿವರು ಯಾರನ್ನೋ ದುರ್ಬಳಕೆ ಮಾಡಿಕೊಂಡು ಸರ್ಕಾರ ನಡೆಸುವ ದರಿದ್ರತನವಿಲ್ಲ. ಮುತಾಲಿಕ್ ಹೇಳಿಕೆಗೆಲ್ಲ ಪ್ರತಿಕ್ರಿಯೆ ನೀಡಲ್ಲ ಎಂದ ಸಚಿವ ಜ್ಞಾನೇಂದ್ರ ಕಾಂಗ್ರೆಸ್, ಜೆಡಿಎಸ್ನವರು ಯಾವಾಗ ಜತೆಯಾಗುತ್ತಾರೆ, ಯಾವಾಗ ಬೇರೆ ಆಗುತ್ತಾರೋ ಗೊತ್ತಿಲ್ಲ. ಅವರಿಬ್ಬರ ಜಗಳದ ನಡುವೆ ನಾವಂತೂ ಸೇಫ್ ಆಗಿದ್ದೇವೆ. ಬಿಜೆಪಿ ಭದ್ರವಾಗಿದ್ದು ರಾಜ್ಯಸಭೆ ಸ್ಥಾನ ಗೆಲ್ಲಲಿದೆ ಎಂದರು.
ಅಭಿವೃದ್ಧಿಗಾಗಿ ಬಿಎಸ್ವೈ ಆಡಳಿತದಲ್ಲಿ ಸಾಲ ಆಗಿರಬಹುದು. ಸಿದ್ಧರಾಮಯ್ಯ ಕಾಲದಲ್ಲಿ ಸಾಲವೇ ಮಾಡಿಲ್ಲವೇ? ದೇವಲೋಕವನ್ನೇ ಇಳಿಸಿದಂತೆ ಸಿದ್ಧರಾಮಯ್ಯ ಮಾತಾಡ್ತಾರೆ. ಸಿದ್ಧರಾಮಯ್ಯ ಆಡಳಿತದಲ್ಲೂ ಗುತ್ತಿಗೆದಾರರಿಗೆ ಬಿಲ್ ಕೊಡದೆ ಸತಾಯಿಸಿದ್ದು ಜನ ಮರೆತಿಲ್ಲ ಎಂದ ಅವರು ಬಿ.ವೈ.ವಿಜಯೇಂದ್ರ ಮುಂದಿನ ಸಿಎಂ ಎಂಬ ವಿಚಾರ ಪ್ರಶ್ನಿಸಿದಾಗ ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ, ಬೊಮ್ಮಾಯಿ ಸಮರ್ಥ ಆಡಳಿತ ನೀಡುತ್ತಿದ್ದಾರೆ ಎಂದರು.
ಬೆAಗಳೂರಿನಲ್ಲಿ ಭಯೋತ್ಪಾದಕನ ಬಂಧನ ಆಗಿದೆ. ಜಮ್ಮು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ, ನಮ್ಮ ಪೊಲೀಸರು ಸಾಥ್ ನೀಡಿದ್ದಾರೆ. ಭಯೋತ್ಪಾದಕಗೆ ಆಶ್ರಯ ನೀಡಿದವರು, ಸಂಪರ್ಕದಲ್ಲಿದ್ದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದ ಅವರು ಒಐಅ ಚಲವಾದಿ ನಾರಾಯಣಸ್ವಾಮಿ ತಲೆ ಮೇಲೆ ಚಡ್ಡಿ ಹೊತ್ತ ಬಗ್ಗೆ ಸಿದ್ಧರಾಮಯ್ಯ ಟೀಕೆ ಬಗ್ಗೆ ಮಾತನಾಡಿದ ಸಚಿವರು ಚಲವಾದಿ ನಾರಾಯಣಸ್ವಾಮಿ ಪ್ರತಿಭಟನೆ ನಡೆಸಿದ್ದಾರೆಂದು ಸಮರ್ಥಿಸಿಕೊಂಡರು.
[t4b-ticker]
+ There are no comments
Add yours