ಹಿರಿಯೂರು: ತಾಲ್ಲೂಕಿನ ಶಾಸಕರು, ನೌಕರರ ಪ್ರೀತಿಗೆ ಪಾತ್ರರಾಗಿರುವ ಪೂರ್ಣಿಮಾ ಶ್ರೀನಿವಾಸ್ ರವರನ್ನು ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರೊಂದಿಗೆ ಭೇಟಿಯಾಗಿ ನೌಕರರ ಬಹುದಿನದ ಬೇಡಿಕೆಯಾದ ಸಮುದಾಯ ಭವನ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯವಿರುವ ಜಮೀನು ಮಂಜೂರು ಮಾಡುವಂತೆ ಶಾಸಕರನ್ನು ಮನವಿ ಮಾಡಲಾಯಿತು ಹಾಗೂ ಜಿಲ್ಲೆಯ ನೌಕರರ ಸಮಸ್ಯೆಗಳ ಕುರಿತಾಗಿ ಚರ್ಚೆ ಮಾಡಿಲಾಯಿತು.
ಸಕಾರಾತ್ಮಕವಾಗಿ ಸ್ಪಂದನೆ ನೀಡಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಸಮುದಾಯ ಭವನ ನಿರ್ಮಾಣ ಮಾಡಲು ಜಮೀನು ಮಂಜೂರು ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ಮಾಜಿ ನಗರಸಭಾ ಅಧ್ಯಕ್ಷ ರಾದ ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಂಜುನಾಥ್ ತಾಲೂಕು ಘಟಕದ ಅಧ್ಯಕ್ಷರಾದ ಶಿವಕುಮಾರ್ ಕಾರ್ಯದರ್ಶಿಗಳಾದ ರಮೇಶ್, ಉಪಾಧ್ಯಕ್ಷರಾದ ಯಶೋಧರ, ಶಿವಾನಂದ, ಬಿ.ಕೆ.ಹನುಮಂತಪ್ಪ, ಹಾಗೂ ಸಂಘದ ಪದಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿ ಮತ್ತು ನೌಕರರು ಉಪಸ್ಥಿತರಿದ್ದರು.
[t4b-ticker]
+ There are no comments
Add yours