ಚಿತ್ರದುರ್ಗ ಜೂ.23 ಇನ್ನರ್ ವೀಲ್ ಕ್ಲಬ್ ವತಿಯಿಂದ ನಗರದ ಧವಳಗಿರಿ ಬಡಾವಣೆಯಲ್ಲಿ ಸುಮಾರು ೬೦ ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಗಾಯಿತ್ರಿ ಶಿವರಾಮ್ ಭವನದ ಉದ್ಘಾಟನೆಯು ಜೂ.24 ರ ಶುಕ್ರವಾರ 12 ಗಂಟೆಗೆ ನಡೆಯಲಿದೆ ಎಂದು ಇನ್ನರ್ ವ್ಹೀಲ್ ಕ್ಲಬ್ನ ಅಧ್ಯಕ್ಷೆ ಶ್ರೀಮತಿ ನಾಗರತ್ನ ಬದರಿನಾಥ್ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕಟ್ಟಡವನ್ನು ಉದ್ಘಾಟನೆ ಮಾಡಲಿದ್ದು, ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ಶ್ರೀ ಶಿವಲಿಂಗಾನಂದ ಸ್ವಾಮಿಜಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಶಾಸಕರಾದ ಟಿ. ರಘುಮೂರ್ತಿ, ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಸದಸ್ಯರಾದ ರಘು ಆಚಾರ್, ಶ್ರೀಮತಿ ಜಯ್ಯಮ್ಮ ಬಾಲರಾಜ್, ನಗರಾಭೀವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್,ಕಾಂಗ್ರೆಸ್ ಮುಖಂಡರಾದ ಹನುಮಲಿ ಷಣ್ಮುಖಪ್ಪ, ಬಸವೇಸ್ವರ ರೈಸ್ ಮಿಲ್ನ ಪ್ರದೀಪ್, ಇಂಜಿನಿಯರ್ ರವೀಂದ್ರ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದೇ ಜೂನ್ ೨೫ ಕ್ಕೆ ಇನ್ನರ್ ವ್ಹೀಲ್ ಕ್ಲಬ್ಗೆ ೫೦ ವರ್ಷಗಳು ತುಂಬಲಿದ್ದು, ಇದರ ಅಂಗವಾಗಿ ಸ್ವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ೫೦ ವರ್ಷ ತುಂಬಿದ ಕ್ಲಬ್ನ ಸದಸ್ಯರುಗಳಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಹೇಳಿದ ಅವರು, ಇನ್ನರ್ ವಿಲ್ಕ್ಲಬ್ ವತಿಯಿಂದ ಮಹಿಳೆಯರಿಗೆ ಟೈಲರಿಂಗ್, ಬ್ಯೂಟಿ ಪಾರ್ಲರ್ ಸೇರಿದಂತೆ ವಿವಿಧ ರೀತಿಯ ತರಬೇತಿಗಳನ್ನು ಉಚಿತವಾಗಿ ನೀಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಲು ನೆರವಾಗುತ್ತಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಅಧ್ಯಕ್ಷೆ ಭಾಗ್ಯಲಕ್ಷಿ, ಮಹಾ ಪೋಷಕರಾದ ಗಾಯಿತ್ರಿ ಶಿವರಾಂ, ಜ್ಯೋತಿ ಲಕ್ಷ್ಮಣ್, ವೀಣಾಸ್ವಾಮಿ ಉಪಸ್ಥಿತರಿದ್ದರು.
[t4b-ticker]
+ There are no comments
Add yours