ಆಗಸ್ಟ್ 3ರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ

 

 

 

 

ಬೆಂಗಳೂರು: ರಾಜ್ಯ  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ ಎಂದು‌ ‘ಸಿದ್ದರಾಮಯ್ಯ–75 ಅಭಿನಂದನಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಆರ್.ವಿ. ದೇಶಪಾಂಡೆ ಮಾಹಿತಿ ನೀಡಿದ್ದಾರೆ‌.

ಮಾಧ್ಯಮಗೋಷ್ಠಿಯ  ಜೊತೆ  ಮಂಗಳವಾರ ಮಾತನಾಡಿದ ಅವರು ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ ಪ್ರೊ. ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಏಳು ಬೀಳು ಕಂಡಿದ್ದಾರೆ. ಅವರ ಅಭಿಮಾನಿಗಳು, ಹಿತೈಷಿ ಗಳ ಒತ್ತಾಸೆಯಿಂದ ಅಮೃತ ಮಹೋತ್ಸವ ಮಾಡಲಾಗುತ್ತಿದೆ’ ಎಂದರು.

‘ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆ.

 

 

ಸಮಿತಿ ಅಧ್ಯಕ್ಷ ಕೆ.ಎನ್. ರಾಜಣ್ಣ ಮಾತನಾಡಿ ಸಿದ್ದರಾಮಯ್ಯ  ಈ ಆಚರಣೆ ಅವಶ್ಯಕತೆ ಇಲ್ಲ ಅಂದಿದ್ದರು. ಆದರೆ, ನಾವೆಲ್ಲ ಅವರ ಮನವೊಲಿಸಿ ಕಾರ್ಯಕ್ರಮ ಆಯೋಜಿಸಿದ್ದೇವೆ. ಈ ಕಾರ್ಯಕ್ರಮದ ಬಗ್ಗೆ ಯಾರೂ ಅನ್ಯತಾ ಭಾವಿಸಬಾರದು ಎಂದರು‌.

ಮಾಜಿ ಸಚಿವ ಬಸವರಾಜ ರಾಯರಡ್ಡಿ, ‘ರಾಜ್ಯದಾದ್ಯಂತ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳಿದ್ದಾರೆ. ಹೀಗಾಗಿ ಎಲ್ಲರೂ ಬರಲು ಅನುಕೂಲ ಆಗಲಿ ಎಂದು ದಾವಣಗೆರೆಯಲ್ಲಿ ಕಾರ್ಯಕ್ರಮ ಆಯೋಜಿದ್ದೇವೆ’ ಎಂದರು.ಕಾಂ

ಕಾಂಗ್ರೆಸ್‌ ಮುಖಂಡರಾದ ಎಚ್.ಸಿ. ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್. ಹನುಮಂತಯ್ಯ, ಎಸ್.ಎಸ್. ಮಲ್ಲಿಕಾರ್ಜುನ, ಪಿ.ಜಿ.ಆರ್. ಸಿಂಧ್ಯಾ, ಬಿ.ಎಲ್. ಶಂಕರ್ ಇದ್ದರು.‌

[t4b-ticker]

You May Also Like

More From Author

+ There are no comments

Add yours