ರಾಜ್ಯ ಸುದ್ದಿ:*ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಶ್ವಾಸಕೋಶ ಕಸಿ ಶಸ್ತ್ರ ಚಿಕಿತ್ಸೆಗೆ ವೈದ್ಯಕೀಯ ಮರುಪಾವತಿಗಳ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿರುವ ಬಗ್ಗೆ.*
ನೌಕರರ ಸಂಘದ ಬಹುದಿನದ ಬೇಡಿಕೆಯಂತೆ ಸ್ವಾಶಕೋಶ ಕಸಿ ಶಸ್ತ್ರ ಚಿಕಿತ್ಸೆಗೆ ಒಳಪಡುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಚಿಕಿತ್ಸೆಗೆ ಅನುಕೂಲವಾಗುವಂತೆ ಹಾಗೂ ನೌಕರರ ಹಿತದೃಷ್ಟಿಯಿಂದ, ನೌಕರರಲ್ಲಿ ಒಂದಷ್ಟು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು ಇಂದು ವೈದ್ಯಕೀಯ ಮರುಪಾವತಿಗಳ ದರವನ್ನು ನಿಗದಿಪಡಿಸಿ ಆದೇಶಹೊರಡಿಸಿದೆ. ಈ ಆದೇಶ ಹೊರಡಿಸುವ ಮೂಲಕ ಇಡೀ ನೌಕರರ ಸಮುದಾಯವು ನೆಮ್ಮದಿಯಿಂದ ಸರ್ಕಾರಿ ಸೇವೆಯನ್ನು ಮಾಡಲು ಅನುವು ಮಾಡಿಕೊಟ್ಟ ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿಗಳು ಸರ್ಕಾರಿ ನೌಕರರ ಬಗ್ಗೆ ಅಪಾರ ಕಾಳಜಿ ಗೌರವ ಹೊಂದಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ಹಾಗೂ ಈ ಆದೇಶ ಹೊರಡಿಸಲು ಸತತ ಪ್ರಯತ್ನದ ನಂತರ ಯಶಸ್ವಿಯಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಎಸ್ ಷಡಕ್ಷರಿ ಅವರಿಗೆ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಈ ಆದೇಶ ಹೊರಡಿಸಲು ಸಹಕರಿಸಿದ ಎಲ್ಲಾ ಉನ್ನತ ಅಧಿಕಾರಿ ಮತ್ತು ನೌಕರರಿಗೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರ ಸಂಘದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.
[t4b-ticker]
+ There are no comments
Add yours