ಚಳ್ಳಕೆರೆ-16 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರ ಬಂದು ಗ್ರಾಮದ ಜನರ ಸಮಸ್ಯೆಗಳನ್ನು ಪರಿಹರಿಸಲಿದೆ ಜನರು ತಾಳ್ಮೆಯಿಂದ ಕೆಲಸ ಕಾರ್ಯಗಳಿಗೆ ಪರಿಹಾರ ಕಂಡುಕೊಳ್ಳಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲಾಡಳಿತ, ಚಳ್ಳಕೆರೆ ತಾಲೂಕು ಆಡಳಿತ ವತಿಯಿಂದ `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬ ಕಾರ್ಯಕ್ರಮದಡಿ ರಾಮಜೋಗಿಹಳ್ಳಿ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಮಟ್ಟದ ಕಂದಾಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಸ್ಥಳದಲ್ಲೇ ಸಾರ್ವಜನಿಕ ಸಮಸ್ಯೆಗಳಿಂದ್ದಲ್ಲಿ ಪರಿಹರಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಚಂದ್ರಯ್ಯ , ತಾಲೂಕು ದಂಡಾಧಿಕಾರಿ ಎನ್. ರಘುಮೂರ್ತಿ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ರಂಗಸ್ವಾಮಿ , ಸದಸ್ಯರುಗಳು ,ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ತಿಪ್ಪೇಶ್ ರೆಡ್ಡಿ, ಮುಖಂಡರಾದ ಸುರೇಶ್ ಬಾಬು, ಸಾರ್ವಜನಿಕರು, ಮುಖಂಡರು ಉಪಸ್ಥಿತರಿದ್ದರು.
[t4b-ticker]
+ There are no comments
Add yours