ಚಿತ್ರದುರ್ಗ ಕರ್ನಾಟಕ ವಾರ್ತೆ ಆಗಸ್ಟ್ 02 :
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಅವಲಂಬಿತರಿಗೆ 19 ವಿವಿಧ ರೀತಿಯ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದೆ. ಅದರಲ್ಲಿ ಶೈಕ್ಷಣಿಕ ಸಹಾಯಧನ ಯೋಜನೆಯು ಒಂದು ಪ್ರಮುಖ ಸೌಲಭ್ಯವಾಗಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಫಲಾನುಭವಿಗಳ ಮಕ್ಕಳು 2022-23ನೇ ಶೈಕ್ಷಣಿಕ ವರ್ಷದಲ್ಲಿ 01 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವಂತಹ ಮಕ್ಕಳ ಸೂಕ್ತ ದಾಖಲೆಗಳೊಂದಿಗೆ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ, ಆಧಾರ್ ಕಾರ್ಡ್, ಮಕ್ಕಳ ವ್ಯಾಸಂಗ ಪ್ರಮಾಣಪತ್ರವನ್ನು ಆಗಸ್ಟ್ 5 ರೊಳಗಾಗಿ ಮಾಹಿತಿಯನ್ನು ಕಾರ್ಮಿಕ ನಿರೀಕ್ಷಕರ ಕಛೇರಿಗಳಿಗೆ ನೀಡುವಂತೆ ಕೋರಲಾಗಿದೆ.
ಕಾರ್ಮಿಕರು ಯಾವುದೇ ಮಧ್ಯವರ್ತಿಗಳನ್ನು ಭೇಟಿಯಾಗದೆ ಖುದ್ದಾಗಿ ನಿಮ್ಮ ವ್ಯಾಪ್ತಿಯ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
[t4b-ticker]
+ There are no comments
Add yours