ಆಗಸ್ಟ್ 20ರಂದು ಗೋಗುದ್ದು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಆಗಸ್ಟ್ 18:
ಹಿರಿಯೂರು ತಾಲ್ಲೂಕಿನ ಗೋಗುದ್ದು ಗ್ರಾಮದಲ್ಲಿ ಇದೇ ಆಗಸ್ಟ್ 20ರಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಮಾಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.
ಜಿಲ್ಲಾಧಿಕಾರಿಗಳು ಭೇಟಿ ನೀಡುವ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಆಗಸ್ಟ್ 20ರಂದು ಚಿತ್ರದುರ್ಗ ತಾಲ್ಲೂಕಿನ ಚೀಳಂಗಿ, ಚಳ್ಳಕೆರೆ ತಾಲ್ಲೂಕಿನ ನೇಲಗೇತನಹಟ್ಟಿ, ಹೊಸದುರ್ಗ ತಾಲ್ಲೂಕಿನ ಚಿಕ್ಕತೇಕಲವಟ್ಟಿ, ಹೊಳಲ್ಕೆರೆ ತಾಲ್ಲೂಕಿನ ಅವಳಿಹಟ್ಟಿ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಸಿದ್ದಾಪುರ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours