ಚಿತ್ರದುರ್ಗ: ಮುರುಘಾಮಠದ ಆಡಳಿತಧಿಕಾರಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಪತ್ನಿ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿರುದ್ದ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಘಾ ಮಠದ ಹಾಸ್ಟೆಲ್ ನ ಮಹಿಳಾ ವಾರ್ಡನ್ ಒಬ್ಬರು ದೂರು ದಾಖಲಿಸಿದ್ದು ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರ ವಿರುದ್ದ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಅಲ್ಲದೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿರುದ್ದವೂ ಕೂಡಾ ಬ್ಲಾಕ್ ಮೇಲ್ ಕೇಸ್ ದಾಖಲಿಸಿದ್ದಾರೆ.
ಸ್.ಕೆ.ಬಿ.ವಿರುದ್ದ ಕಲಂ 354 ಅಡಿ ಲೈಂಗಿಕ ದೌರ್ಜನ್ಯ ಯತ್ನ ನಡೆಸಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಇನ್ನೂ ಕಲಂ 341, 342,504,506 ಅಡಿ ಕೇಸ್ ದಾಖಲಾಗಿದ್ದು, ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.
[t4b-ticker]
+ There are no comments
Add yours