ಚಳ್ಳಕೆರೆ: ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳನ್ನು ಕಂದಾಯ ಇಲಾಖೆಯ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡುವ ಬಗ್ಗೆ ರೈತ ಪ್ರತಿನಿಧಿಗಳು ಚುನಾಯಿತ ಪ್ರತಿನಿಧಿಗಳು ಮತ್ತು ಸಾರ್ವಜನಿಕರೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಹಶೀಲ್ದಾರ್ ಎನ್.ರಘುಮೂರ್ತಿ ಚರ್ಚೆ ನಡೆಸಿದರು.
ಬ್ಯಾಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಳ್ಳಿ , ಬಂಜಗೆರೆ ಮತ್ತು ಬೇಡರೆಡ್ಡಿಹಳ್ಳಿ ಗ್ರಾಮಗಳಲ್ಲಿ ಬಹುತೇಕ ರೈತರು ಬಡವರು ಇದ್ದಾರೆ. ಹಲವಾರು ವರ್ಷಗಳಿಂದ ಈ ಗ್ರಾಮಗಳಲ್ಲಿ ಪೌತಿಕತೆ, ಪೋಡಿ, ಪಿಂಚಣಿಗಳು ದಾರಿ ವಿವಾದಗಳು ಮತ್ತು ಇನ್ನಿತರೆ ಕಂದಾಯ ಇಲಾಖೆಯ ಸಮಸ್ಯೆಗಳಿದ್ದು ಇವುಗಳನ್ನು ಬಗೆ ಹರಿಸುವಂತೆ ಬ್ಯಾಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮನವಿ ಮಾಡಿದ ಹಿನ್ನೆಲೆ ಇಂದು ಬೆಳಗ್ಗೆ ಎಂಟು ಗಂಟೆಗೆ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ತಾಲೂಕಿನಲ್ಲಿ 68 ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳ ಮತ್ತು ಕ್ಷೇತ್ರದ ಮಂತ್ರಿಗಳ ಸೂಚನೆಯಂತೆ ಕಂದಾಯ ಇಲಾಖೆಯ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗಿದೆ. ಮುಖ್ಯವಾಗಿ ದಾರಿ ವಿವಾದ ,ಪೌತಿಕತೆ ಜಮೀನಿನ ಪೋಡಿ ,ಸ್ಮಶಾನ ಒತ್ತುವರಿ, ಪಿಂಚಣಿಗಳ ಪರಿಶೀಲನೆ ಹಾಗೂ ಇನ್ನಿತರ ಕಂದಾಯ ಇಲಾಖೆ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು ಹತ್ತು ದಿನಗಳ ಕಾಲಾವಕಾಶ ನೀಡಿ ಈ ಅವಧಿಯಲ್ಲಿ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಿ ಅಂತಿಮವಾಗಿ ಜಿಲ್ಲಾಧಿಕಾರಿಗಳನ್ನು ಈ ಸಭೆಗೆ ಆಹ್ವಾನಿಸಿ ಈ ಗ್ರಾಮಗಳನ್ನು ಸಮಸ್ಯೆ ಮುಕ್ತ ಗ್ರಾಮಗಳೆಂದು ಘೋಷಿಸಲಾಗುವುದು ಎಂದರು. ಎಲ್ಲ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಮನವಿಯನ್ನು ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರಿಗೆ ಮನವಿ ಸಲ್ಲಿಸ ಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಜಯಲಕ್ಷ್ಮಿ , ಸದಸ್ಯರಾದ ಬಂಜಿಗೆರೆ ಅರುಣ್ ಕುಮಾರ್ , ತಿಮ್ಮಯ್ಯ ,ವೇಣು ,ನಾಗೇಶ್ ರೆಡ್ಡಿ ರಾಜ್ಯಸ್ವಿ ನಿರೀಕ್ಷಕ ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಸತೀಶ್ ಹಾಜರಿದ್ದರು.
[t4b-ticker]
+ There are no comments
Add yours