ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 23:
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಸೆಪ್ಟಂಬರ್ 24ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಎಲ್.ಆರ್ ಪದವಿ ಪೂರ್ವ ಕಾಲೇಜು ಆವರಣದ ಹೆಲಿಪ್ಯಾಡ್ಗೆ ಆಗಮಿಸಿ, ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ವತಿಯಿಂದ ಆಯೋಜಿಸಿರುವ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಯವರ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1.30ಕ್ಕೆ ಬಿ.ಎಲ್.ಆರ್ ಪದವಿ ಪೂರ್ವ ಕಾಲೇಜು ಆವರಣದ ಹೆಲಿಪ್ಯಾಡ್ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.
========
[t4b-ticker]
+ There are no comments
Add yours