ಬೆಂಗಳೂರು, ಸೆಪ್ಟೆಂಬರ್ 28; “ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಬರುತ್ತಿದ್ದಂತೆ ಸ್ವಾಗತಿಸುತ್ತೇನೆ.
ಆದರೆ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ” ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, “ಭಾರತ್ ಜೋಡೋ ಯಾತ್ರೆ ಒಳ್ಳೆಯ ಉದ್ದೇಶ ಇಟ್ಟುಕೊಂಡು ನಡೆಯುತ್ತಿರಬಹುದು. ಇದರಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದ್ದಾರೆ. ಸ್ಥಳೀಯ ಮುಖಂಡರ ಜೊತೆ ಮಾತನಾಡಿ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇನೆ” ಎಂದರು.
[t4b-ticker]
+ There are no comments
Add yours