ರಾಜ್ಯಮಟ್ಟದ ಸ್ಪರ್ಧೆಗೆ ಕುಮಾರಿ ನಾಗಶುಭ ಹಾಗೂ ಕುಮಾರಿ ಸಂಜನಾ ಆಯ್ಕೆ

 

 

 

 

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರಿನ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಸಂತ ಜೋಸೆಫ್ ಕಾನ್ವೆಂಟ್ ಶಾಲೆಯ ಕುಮಾರಿ ನಾಗಶುಭ ಜಿಲ್ಲೆಗೆ ಪ್ರಥಮ ಹಾಗೂ ಬೃಹನ್ಮಠ ಪ್ರೌಢಶಾಲೆಯ ಕುಮಾರಿ ಸಂಜನಾ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

 

ಅಕ್ಟೋಬರ್ ೨ ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು‌‌.ಜಿಲ್ಲೆಯಿಂದ ಪ್ರಥಮ ದ್ವಿತೀಯಸ್ಥಾನ ಪಡೆದವರು ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುತ್ತಾರೆ.ಜಿಲ್ಲಾ ಹಂತದಲ್ಲಿ ಬಹುಮಾನ ಪಡೆಯುತ್ತಾರೆ.ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಚಿತ್ರದುರ್ಗ ಜಿಲ್ಲಾ ಸಂಚಾಲಕರಾದ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಡಾ ಮಹೇಶ್ ಕೆ ಎನ್ ತಿಳಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷರಾದ ಡಾ ಎಚ್ ಎಸ್ ಕೆ ಸ್ವಾಮಿ ಹಾಗೂ ಕಾರ್ಯದರ್ಶಿ ಮಹಾಂತೇಶ್ ಅಭಿನಂದನೆಗಳನ್ನು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours