ಚಿತ್ರದುರ್ಗ ಕರ್ನಾಟಕ ವಾರ್ತೆ ಅಕ್ಟೋಬರ್ 12:
2022-23ನೇ ಸಾಲಿಗೆ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲಾ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವಾ ಕ್ಷೇತ್ರ) ಸಾಧನೆಗೈದ ವಿಕಲಚೇತನರಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ, ಸಲ್ಲಿಸಿರುವ ವಿಶೇಷ ಶಿಕ್ಷಕರುಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.(Application Invitation for State Award)
ಅರ್ಜಿ ನಮೂನೆಗಳನ್ನು ಇಲಾಖೆಯಿಂದ ಅಥವಾ ವೆಬ್ ವಿಳಾಸ WWW.dwdsc.kar.nic.in ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಪ್ರಸ್ತಾವನೆಗಳೊಂದಿಗೆ ಅಕ್ಟೋಬರ್ 25ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಕಚೇರಿಗೆ ದ್ವಿ ಪ್ರತಿಯಲ್ಲಿ ಸಲ್ಲಿಸಲು ಕೋರಿದೆ.
ಪ್ರತಿ ವರ್ಷ ಡಿಸೆಂಬರ್-3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರತಿ ವರ್ಷದ ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-235284ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
+ There are no comments
Add yours