ಬೆಳಗಾವಿ: ಹಲವು ತಿಂಗಳಿಂದ ಸಚಿವ ಸಂಪುಟ ಆಗುತ್ತೆ ಅಂತ ಕಾದು ಕುಳಿತಿದ್ದ ಶಾಸಕರಿಗೆ ಲ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ವಿಸ್ತರಣೆಯ ಸುಳಿವನ್ನು ಕೊಟ್ಟಿದ್ದಾರೆ. ಸಚಿವಾಕಾಂಕ್ಷಿಗಳಿಗೆ ಶೀಘ್ರದಲ್ಲಿಯೇ ಶುಭ ಸುದ್ದಿ ದೊರೆಯಲಿದೆ ಎಂದು ಹೇಳುವ ಮೂಲಕ ಶಾಸಕರಿಗೆ ಮತ್ತೆ ಆಸೆ ಗರಿಗೆದರಿದೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವಾಕಾಂಕ್ಷಿಗಳಿಗೆ ಒಂದು ರೀತಿ ಅಭಯ ಕೊಟ್ಟಿದ್ದಾರೆ.
ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಜನಸಂಕಲ್ಪ ಯಾತ್ರೆ ನಡುವೆಯೇ ದೆಹಲಿಗೆ ತೆರಳುತ್ತಿದ್ದೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುವುದು. ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ ಎಂದರು.
[t4b-ticker]
+ There are no comments
Add yours