ಬೆಂಗಳೂರು(ಅ.23): ವಿಧಾನಭೆಯ ಉಪ ಸಭಾಪತಿ ಆನಂದ್ ಮಾಮನಿ(56) ಇಂದು ರಾತ್ರಿ12 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರನ್ನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಆನಂದ ಮಾಮನಿ ಅವರು ಈ ಮೊದಲು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನ ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಂಬುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನ ಸವದತ್ತಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಅಂತ ತಿಳಿದು ಬಂದಿದೆ.
[t4b-ticker]
+ There are no comments
Add yours