ಬೆಂಗಳೂರು:ಬಿಜೆಪಿಯ ಹಿರಿಯ ನಾಯಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸದ್ಯವೇ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.
ಎರಡು ಬಾರಿ ಹಿರೇಕೆರೂರು ಕ್ಷೇತ್ರದ ಶಾಸಕರಾಗಿದ್ದವರು ಯು.ಬಿ.ಬಣಕಾರ್. 1994 ಹಾಗೂ 2013ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ೨೦೧೮ರ ಚುನಾವಣೆಯಲ್ಲಿ ಯು.ಬಿ. ಬಣಕಾರ್ ಅವರು ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಸಿ. ಪಾಟೀಲ್ ಎದುರು ಸೋಲು ಕಂಡಿದ್ದರು. ಈ ನಡುವೆ ಸ್ವತಃ ಬಿ.ಸಿ. ಪಾಟೀಲ್ ಅವರೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಉಪಚುನಾವಣೆಯಲ್ಲಿ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ತಮ್ಮ ರಾಜೀನಾಮೆ ಕುರಿತು ಬೆಂಗಳೂರಲ್ಲಿ ಯು.ಬಿ. ಬಣಕಾರ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಯಡಿಯೂರಪ್ಪನವರು ನಮ್ಮಿಬ್ಬರು ನಾಯಕರನ್ನು ಪಕ್ಷದ ಎರಡು ಕಣ್ಣುಗಳು ಅಂದ್ರು. ಆದರೆ, ನಾವಿಬ್ರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದೀಯ ಮಂಡಳಿ ನಾಯಕ ಯಡಿಯೂರಪ್ಪನವರ ಮೇಲೆ ನನಗೆ ಬೇಸರವಿಲ್ಲ. ಅವರು ಮುಖ್ಯಮಂತ್ರಿ ಆಗಬೇಕಿತ್ತು. ಅದಕ್ಕೆ ನಾನು ಅಂದು ಏನೂ ಹೇಳಲಿಲ್ಲ ಎಂದೂ ಯು.ಬಿ. ಬಣಕಾರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ರಾಜೀನಾಮೆ ಕುರಿತು ಯು.ಬಿ. ಬಣಕಾರ ಅವರು ಸ್ಪಷ್ಟನೆ ನೀಡಿದ್ದು, ಹಿರೇಕೆರೂರು ಕ್ಷೇತ್ರದಲ್ಲಿ ನಾವು ಇಬ್ಬರು ನಾಯಕರು ಇದ್ದೆವು. ಆದರೆ, ಇಬ್ಬರೂ ಒಟ್ಟಿಗೆ ಹೋಗಲು ಆಗಲಿಲ್ಲ ಎಂದು ಮಾಜಿ ಶಾಸಕ ಹೇಳಿದ್ದಾರೆ.
[t4b-ticker]
+ There are no comments
Add yours