ನ.22ರಂದು ಚಳ್ಳಕೆರೆ ನಗರಕ್ಕೆ ಬಸವರಾಜ ಬೊಮ್ಮಾಯಿ.

 

 

 

 

ಚಳ್ಳಕೆರೆ-14 ನ.22ರಂದು ನಗರಕ್ಕೆ ಆಗಮಿಸುವ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿರವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ‌ಸಿದ್ದತೆ ಮಾಡಿಕೊಳ್ಳಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.‌

 

 

ಅವರು ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 22ರ ಮಂಗಳವಾರ ಹಿರಿಯೂರು ಮೂಲಕ ಚಳ್ಳಕೆರೆ ತಾಲೂಕಿನ ರಾಣಿ ಕೆರೆಗೆ ಬಾಗಿನ ಅರ್ಪಿಸಿ, ಅಲ್ಲಿಂದ ನಗರದ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುವರು. ಅದರಂತೆ 20ರಂದು ಬಳ್ಳಾರಿಯಲ್ಲಿ ನಡೆಯುವ ಎಸ್ಟಿ ಸಮಾವೇಶಕ್ಕೆ ಪ್ರತಿ ಗ್ರಾಮ ಪಂಚಾಯಿತಿಯಿಂದ ನೂರಾರು ಕಾರ್ಯಕರ್ತರನ್ನು ಹೊರಡಿಸುವ ಜವಾಬ್ದಾರಿಯನ್ನು ಪ್ರತಿಯೊಬ್ಬ ಬೂತ್ ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ತೆಗೆದುಕೊಂಡು ನಮ್ಮ‌ ತಾಲ್ಲೂಕಿನಿಂದ‌ ಸುಮಾರು ಐದು ಸಾವಿರ‌ಕ್ಕೂ ಹೆಚ್ಚು ಕಾರ್ಯಕರ್ತರು ಬರುವಂತೆ ಸಿದ್ದತೆ ಮಾಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಮಹಿಳೆಯರು, ಯುವ ಘಟಕದ ಪ್ರಮುಖರು, ಅಭಿಮಾನಿಗಳು ಸೇರಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿ ಎಂದರು.
ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಜಿಲ್ಲಾಧ್ಯಕ್ಷ ಎ.ಮುರುಳಿ,ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಜೇಷ್ಠ ಪಡಿವಾಳ್ ಜಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ರಾಜೇಶ್ ಬುರುಡೆಕಟ್ಟೆ, ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್, ಕಲ್ಲಂ ಸೀತಾರಾಮ್ ರೆಡ್ಡಿ,ಹಿರಿಯ ಮುಖಂಡರಾದ ಸೋಮಶೇಖರ್ ಮಂಡಿಮಠ್,ಶಿವಪುತ್ರಪ್ಪ, ಸಣ್ಣ ಸೂರಯ್ಯ, ದೇವರಾಜ್ ರೆಡ್ಡಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ್ ರೆಡ್ಡಿ, ಬಸವರಾಜ್ಹಾಗೂ ಮಂಡಲದ ಪದಾಧಿಕಾರಿಗಳು, ಮೋರ್ಚಾಗಳ ಪದಾಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು , ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು…

[t4b-ticker]

You May Also Like

More From Author

+ There are no comments

Add yours