ಚಿತ್ರದುರ್ಗ, ನ. ೧೮
ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರವು ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯನ್ನು ಮರು ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗ ನಗರದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕಿನಲ್ಲಿ ಯಶಸ್ವಿನಿ ಯೋಜನೆಯ ನೊಂದಣಿ ಪ್ರಕ್ರಿಯೆಗೆ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್. ಆರ್.ಲಕ್ಷ್ಮಿಕಾಂತರೆಡ್ಡಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಹಾಗೂ ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರಾದ ರಘುರಾಮರೆಡ್ಡಿ, ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರಾದ ಎನ್. ಜಯ್ಯಣ್ಣ, ಟಿ.ಎಚ್. ರಾಜಪ್ಪ, ಜೆ. ಸುರೇಶ್, ಶ್ರೀಮತಿ ಸಿ. ಸುಜಾತ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ವರ್ಗ ಮತ್ತು ಸೌಹಾರ್ದ ಜಿಲ್ಲಾ ಸಂಯೋಜಕ ನಟರಾಜ ಉಪಸ್ಥಿತರಿದ್ದರು.
[t4b-ticker]
+ There are no comments
Add yours