ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.21:
2022-23ನೇ ಸಾಲಿನ ಆತ್ಮ ಯೋಜನೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.
ಜಮೀನು ಹೊಂದಿರುವ ಆಸಕ್ತ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವುದು.
ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿಗಾಗಿ ತಾಲ್ಲೂಕು ಕೃಷಿ ಸಹಾಯಕ ಕೃಷಿನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.
[t4b-ticker]
+ There are no comments
Add yours