ಚಳ್ಳಕೆರೆ: ಶಾಸಕರಾದ ಟಿ ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಕಾಲೇಜುಗಳ ಹೆಚ್ಚುವರಿ ಕೊಠಡಿ ಮತ್ತು ಲ್ಯಾಬೋರೇಟರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪಂಚಾಯತ್ ರಾಜ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಪರಶುರಾಮಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆರ್. ಐ. ಡಿ. ಎಫ್. ನಬಾರ್ಡ್ -23 ಯೋಜನೆ ಅಡಿ 93.00 ಲಕ್ಷ ರೂ.ಗಳಲ್ಲಿ ನಿರ್ಮಾಣ ಮಾಡಲಾಗಿರುವ ಹೆಚ್ಚುವರಿ ಕೊಠಡಿಗಳು ಮತ್ತು ಲ್ಯಾಬೋರೇಟರಿ ಉದ್ಘಾಟನೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 2.00ಕೋಟಿ ರೂ.ಗಳ ಅನುದಾನದಲ್ಲಿ ನಿರ್ಮಿಸಲಾಗಿರುವ ಕೊಠಡಿಗಳ ಉದ್ಘಾಟನೆ ಮತ್ತು ಐ.ಸಿ.ಐ.ಸಿ.ಐ. ಫೌಂಡೇಶನ್ ವತಿಯಿಂದ ಮಳೆ ನೀರು ಕೊಯ್ಲು ಕಾಮಗಾರಿ ಉದ್ಘಾಟನಾ ಸಮಾರಂಭ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ವೆಂಕಟೇಶ್, ಉಪಾಧ್ಯಕ್ಷರಾದ ಜಗಳೂರು ಸ್ವಾಮಿ, ಸದಸ್ಯರುಗಳಾದ ರುದ್ರೇಶ್, ಗೋವಿಂದಪ್ಪ, ನಾಗಭೂಷಣ, ಮುಖಂಡರುಗಳಾದ ಕೇಶವಣ್ಣ, ಜಯವೀರಚಾರಿ, ಗುಜ್ಜಾರಪ್ಪ, ಮತ್ತು ಮುಖಂಡರು ಕಾರ್ಯಕರ್ತರು, ಸಾರ್ವಜನಿಕರು ಮತ್ತು ಶಾಲಾ ಶಿಕ್ಷಕರಿಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
[t4b-ticker]
+ There are no comments
Add yours