ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ಪೀಕರಿಸುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾರೆ.
ಖಾಸಗಿ ಶಾಲೆಯೊಂದರ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಬಿಇಓ ಸಿದ್ದಪ್ಪ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹರಿಹರದ ಕೆ.ಆರ್.ನಗರದ ದುರುಗೋಜಿ ಗೋಪಾಲರಾವ್ ಎಜುಕೇಷನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಿ.ಜಿ.ರಘುನಾಥ್ ಅವರು ತಮ್ಮ ವಿದ್ಯಾದಾಯಿನಿ ಶಾಲೆಯ ಸಿಬಿಎಸ್ಇ ಮಾನ್ಯತೆ ನವೀಕರಣಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ನಮೂನೆ 15ರಲ್ಲಿ ಅಗತ್ಯ ಪ್ರಮಾಣಪತ್ರ ಹಾಗೂ ಶಾಲಾ ಶುಲ್ಕ ನಿಗದಿ ಮಾಡಿಕೊಡಲು ಬಿಇಒ ಕಚೇರಿಗೆ ಮನವಿ ಸಲ್ಲಿಸಿ ವಾರಗಳು ಉರುಳಿದರು ಸಹ ಕೆಲಸ ಮಾಡದೇ ಓಡಾಟ ಮಾಡಿದ್ದರು ಎನ್ನಲಾಗಿದೆ.
[t4b-ticker]
+ There are no comments
Add yours