ಟ್ರಾಫಿಕ್ ಫೈನ್ ಕಟ್ಟುವವರಿಗೆ ಸಿಹಿ ಸುದ್ದಿ

 

 

 

 

ಬೆಂಗಳೂರು: ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಶೇಕಡ 50ರ ತನಕ ರಿಯಾಯಿತಿಯನ್ನು ನೀಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದೆ.

 

 

ಈ ಹಿಂದೆ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರಾದ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಈ ಬಗ್ಗೆ ಮನವಿ ಮಾಡಿಕೊಂಡಿದ್ದರು.

ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳ ಮನವಿ ಮೇರೆಗೆ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಆದೇಶವು ಫೆ 11ರೊಳಗೆ ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಮಾತ್ರ ಅನ್ವಯವಾಗಲಿದೆ. ಇದು ಸೀಮತ ಅವಧಿಯಲ್ಲಿ ನಡೆಯಲಿದೆ. ಈ ಮೂಲಕ ನಿಗದಿತ ದಿನಾಂಕದೊಳಗೆ ಟ್ರಾಫಿಕ್ ರೂಲ್ಸ್‌ ಉಲ್ಲಂಘನೆ ಮಾಡಿ ದಂಡವನ್ನು ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿರುವವರು ಮುಂದಿನ ಕಾನೂನಿನ ಕುಣಿಕೆಯಿಂದ ಬಚಾವ್‌ ಆಗಲು ಇದು ಸುವರ್ಣ ಅವಕಾಶವನ್ನು ನೀಡಿದೆ. ಫೆ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಮಾಡಿದೆ ಎನ್ನಲಾಗಿದೆ.

[t4b-ticker]

You May Also Like

More From Author

+ There are no comments

Add yours