ಇಂದು ಪವರ್ ಕಟ್ ಎಲ್ಲೆಲ್ಲಿ ಕರೆಂಟ್ ಇರಲ್ಲ ನೋಡಿ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.10:
ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆವಿ ಜೆ.ಎನ್.ಕೋಟೆ ಮತ್ತು 66/11 ಕೆವಿ ಗರಗ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಫೆ.13ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆದಯಾಗುವ ಪ್ರದೇಶಗಳು: ಜೆ.ಎನ್.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಮಾರ್ಗಗಳಾದ ಜೆ.ಎನ್.ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆ.ಸಿ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗರಗ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಮಾರ್ಗಗಳಾದ ಸೋಮೇನಹಳ್ಳಿ, ಶ್ರೀರಾಂಪುರ, ಎಸ್.ನೇರಲಕೆರೆ, ಕಬ್ಬಳ, ಬಲ್ಲಾಳಸಮುದ್ರ, ಗರಗ, ಬೆಲಗೂರು, ಕೋಡಿಹಳ್ಳಿ, ಕಾಲ್ಕೆರೆ, ತೋಣಚೇನಹಳ್ಳಿ, ಗವಿರಂಗಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours