Sunday, May 19 2024

ಕಿಚ್ಚ ಬೆಂಬಲ ಕೊಟ್ಟಿದ್ದು ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಬಿಎಸ್ ವೈ

 

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಪಕ್ಷದ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಬಿಜೆಪಿಗೆ ಬೆಂಬಲ ನೀಡಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದರು.
ನಟ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತಿರುವುದು ಕಾಂಗ್ರೆಸ್‌ನವರಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ, ಈ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಏನೇನೋ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರಿನ ವರುಣಾ ಕ್ಷೇತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ, ಸ್ಪರ್ಧಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವರಿಷ್ಠರು ಏನು ಹೇಳುತ್ತಾರೋ ಅದರಂತೆ ಎಲ್ಲವೂ ನಡೆಯುತ್ತೆ. ಅಭ್ಯರ್ಥಿಗಳ ಪಟ್ಟಿಯನ್ನು ನಾಳೆ ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದರು.

[t4b-ticker]

You May Also Like

More From Author

+ There are no comments

Add yours

ಚಿತ್ರದುರ್ಗ ಜೆಡಿಎಸ್ ಟಿಕೆಟ್ ಗೆ ಭಾರೀ ಡಿಮ್ಯಾಂಡ್ , ಕಾಂಗ್ರೆಸ್ ಇಬ್ಬರು ನಾಯಕರು ಜೆಡಿಎಸ್ ಟಿಕೆಟ್ ಪೈಪೋಟಿ

ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬೇಸತ್ತ ಜನ ಕಾಂಗ್ರೆಸ್ ಪರ ಒಲವು:ಮಾಜಿ ಸಚಿವ ಹೆಚ್.ಆಂಜನೇಯ

[t4b-ticker]