ನವದೆಹಲಿ: ಇಂದು ಸಂಜೆ 7ಕ್ಕೆ ಶಾಸಕಾಂಗ ಸಭೆ ಕರೆದಿದ್ದೇನೆ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಕೆ.ಸಿ ವೇಣುಗಾಪಾಲ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆಯಲಾಗಿದೆ.
ಈ ಸಭೆಗೆ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಅವರಿಗೆ ವಿಶೇಷ ಆಹ್ವಾನವನ್ನು ನೀಡಲಾಗಿದೆ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿನ ವೇಣುಗೋಪಾಲ್ ನಿವಾಸಕ್ಕೆ ಇದೀಗ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದಂತ ಡಿಕೆ ಶಿವಕುಮಾರ್ ಸಂಜೆ 7ಕ್ಕೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ ಎಂಬುದಾಗಿ ತಿಳಿಸಿದರು.
ಅಂದಹಾಗೇ ಡಿಕೆ ಶಿವಕುಮಾರ್ 30-30 ತಿಂಗಳು ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಹಿತ ದೃಷ್ಠಿಯಿಂದ ಅಧಿಕಾರ ಹಂಚಿಕೆ ಸೂತ್ರ ಪಾಲನೆ ಮಾಡಲಾಗುತ್ತಿದೆ. ಕರ್ನಾಟಕ ಜನರ ಸೇವೆ ಮಾಡಲು ನಾನು ಕಟಿಬದ್ಧನಾಗಿದ್ದೇನೆ ಎಂದರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
[t4b-ticker]
+ There are no comments
Add yours