ಚಿತ್ರದುರ್ಗ, ಸೆಪ್ಟೆಂಬರ್28:
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಸೆಪ್ಟೆಂಬರ್29 ರಂದು ಒಂದು ದಿನದ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬಳ್ಳಾರಿಯಿಂದ ಹೊರಟು, ಮಧ್ಯಾಹ್ನ 12ಕ್ಕೆ ಮೊಳಕಾಲ್ಮುರಿಗೆ ಆಗಮಿಸುವರು. ನಂತರ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1ಕ್ಕೆ ಮೊಳಕಾಲ್ಮುರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ ಪಕ್ಷದ ನೂತನ ಕಚೇರಿ ಉದ್ಘಾಟಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 3ಕ್ಕೆ ಬಳ್ಳಾರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾ
[t4b-ticker]
+ There are no comments
Add yours