ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲೂರಹಳ್ಳಿ ಮತ್ತು ಅಬ್ಬೇನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ( Marijuana)ಸಾಗಿಸುತ್ತಿದ್ದ ವ್ಯಕ್ತಿಯನ್ನು ವಶ ಪಡೆದು ಅವನಿಂದ ಸುಮಾರು ೪೭೫ ಗ್ರಾಂ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಹಸು ಘಟಕ ವಿತರಿಸಲು ಅರ್ಜಿ ಆಹ್ವಾನ
ಈ ಬಗ್ಗೆ ಮಾಹಿತಿ ನೀಡಿದ ಅಬಕಾರಿ ನಿರೀಕ್ಷಕ ಸಿ.ನಾಗರಾಜು, ತಾಲ್ಲೂಕು ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಮೊಳಕಾಲ್ಮೂರು ತಾಲ್ಲೂಕಿನ ನೇತ್ರನಹಳ್ಳಿ ಗ್ರಾಮದ ಬೋಸಯ್ಯ ತಮ್ಮ ಬೈಕ್ ನಲ್ಲಿ ಒಣ ಗಾಂಜಾವನ್ನು ಇಟ್ಟು ಸಾಗಿಸುವಾಗ ನಮ್ಮನ್ನು ಕಂಡು ಓಡಿಹೋಗಲು ಪ್ರಯತ್ನಿಸುತ್ತಿದ್ದಾಗ ಅನುಮಾನಗೊಂಡು ತಪಾಸಣೆ ನಡೆಸಿದಾಗ ಆರೋಪಿ ಒಂದು ಪ್ಲಾಸ್ಟಿಕ್ ಚೀಲದಲ್ಲಿ ಸುಮಾರು ೪೭೫ಗ್ರಾಂ ಒಣ ಗಾಂಜಾವನ್ನು ಸಾಗಿಸುತ್ತಿದ್ದು ಕಂಡುಬಂದಿದೆ. ಕೂಡಲೇ ವ್ಯಕ್ತಿಯನ್ನು ಬಂಧಿಸಿ ಆತನಿಂದ ಸುಮಾರು೧.೨೦ಲಕ್ಷ ಮೌಲ್ಯದ ಒಂದು ಬೈಕ್ ಹಾಗೂ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಉಪ ನಿರೀಕ್ಷಕ ಟಿ.ರಂಗಸ್ವಾಮಿ, ಡಿ.ಟಿ.ತಿಪ್ಪಯ್ಯ, ಪೇದೆಗಳಾದ ನಾಗರಾಜ್.ಸೋಮಶೇಖರ ದಾಳಿ ವೇಳೆ ಪಾಲ್ಗೊಂಡಿದ್ದರು.
ಪೋಟೋ೧೭ಸಿಎಲ್ ಕೆ೪ ಚಳ್ಳಕೆರೆ ತಾಲೂಕಿನ ಮಲ್ಲೂರಹಳ್ಳಿ-ಅಬ್ಬೇನಹಳ್ಳಿ ಗ್ರಾಮದ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾ ವಶಪಡಿಸಿಕೊಂಡಿರುವ ಅಬಕಾರಿ ಇಲಾಖೆ ಅಧಿಕಾರಿಗಳು.
+ There are no comments
Add yours