ಚಿತ್ರದುರ್ಗ:ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಪಂಗಡಕ್ಕೆ 7.5% ಮೀಸಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉಪಸಮಿತಿ ರಚಿಸಲು ಒಪ್ಪಿಗೆ ನೀಡಿ ಮಹತ್ವದ ನಿಧಾ೯ರ ಕೈಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ಬಿಜೆಪಿ ಎಸ್.ಟಿ .ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹಂತೇಶ್ ನಾಯಕ ಹರ್ಷ ವ್ಯಕ್ತಪಡಿಸಿದರು.
ನಾಯಕ ಸಮುದಾಯದ ಹೋರಾಟ ಹಾಗೂ ಮನವಿಗೆ ಸ್ಪಂದಿಸಿ ಈ ಮಹತ್ವದ ನಿಧಾ೯ರ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜ ಕಲ್ಯಾಣ ಸಚಿವರಾದ ಬಿ. ಶ್ರೀ ರಾಮುಲು ರವರಿಗೆ ಹಾಗೂ ಸಮುದಾಯದ ಎಲ್ಲಾ ಸಚಿವರಿಗೆ ಸಂಸದರಿಗೆ ಧನ್ಯವಾದಗಳು. 7% ಮೀಸಲಾತಿಯಿಂದ ನಾಯಕ ಸಮಾಜಕ್ಕೆ ಸಾಕಷ್ಟು ಅನುಕೂಲವಾಗಿ ಭವಿಷ್ಯದಲ್ಲಿ ಯುವ ಸಮೂಹಕ್ಕೆ ಬದುಕು ಕಟ್ಟಿಕೊಳ್ಳಲು ಉನ್ನತ ಮಟ್ಟಕ್ಕೆ ಬೆಳೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
[t4b-ticker]
+ There are no comments
Add yours