ಶಬರಿಮಲೆ, ಜ. 14: ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಲು ಕಾಯುತ್ತಿರುತ್ತಾರೆ. ಇಂದು ಮಳೆಯ ಆತಂಕದ ನಡುವೆಯೇ ಮಕರ ಜ್ಯೋತಿಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದರು. ಕೊನೆಗೂ ಇಂದು ಸಂಜೆ 6.45ಕ್ಕೆ ಶಬರಿಮಲೆಯಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ.
ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯನ್ನು ವೀಕ್ಷಿಸಿದರು. ಈ ವೇಳೆ ನಕ್ಷತ್ರವು ಆಕಾಶದಲ್ಲಿ ಬೆಳಗಿ ಭಕ್ತರಿಗೆ ಆಶೀರ್ವಾದವನ್ನು ತಂದಿತು. ಆಕಾಶದಲ್ಲಿ ಬೇರೆ ಯಾವುದೇ ನಕ್ಷತ್ರಗಳಿಲ್ಲದೆ ಉತ್ರಮ ನಕ್ಷತ್ರದ ದರ್ಶನವನ್ನು ಪಡೆದ ಭಕ್ತರು ಧನ್ಯರಾದರು.






