ಮೂಡುಬಿದಿರೆ, ಮೇ. 7: ಕಾರು ಪಲ್ಟಿಯಾಗಿ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಗುರುವಾರ ಸಂಭವಿಸಿದೆ.
ಕೆಎ-20 ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರು, ಪಕ್ಷಿಕೆರೆಯಿಂದ ಮೂಡುಬಿದಿರೆಯ ಕಡೆಗೆ ಪ್ರಯಾಣಿಸುತ್ತಿತ್ತು, ಅದರಲ್ಲಿ ಚಾಲಕ ಮಾತ್ರ ಇದ್ದ ಎಂದು ತಿಳಿದು ಬಂದಿದೆ.ಮೂಲಗಳ ಪ್ರಕಾರ, ಬೆಳಗಿನ ಜಾವ ಸುರಿದ ಮಳೆಯ ನಂತರ ರಸ್ತೆಯಲ್ಲಿ ಎಣ್ಣೆಯ ಅವಶೇಷಗಳು ಕಂಡುಬಂದಿವೆ. ತಿರುವು ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್, ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪ್ರಾಯದಿಂದ ಪಾರಾಗಿದ್ದಾನೆ.





