ಬೆಂಗಳೂರು : ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ಒಬ್ಬ ನಾಯಕ ನಟನನ್ನು ಕಳೆದುಕೊಂಡಿದೆ..
ಶನಿವಾರ ರಾತ್ರಿ ಸ್ನೇಹಿತ ನವೀನ್ ಜೊತೆಗೆ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಮನೆಯ ಸ್ವಲ್ಪ ದೂರದಲ್ಲಿ ಇರುವಾಗಲೇ ನಟ ಸಂಚಾರಿ ವಿಜಯ್ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅಪಘಾತವಾಗಿ ತಲೆಯ ಎಡಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು, ರಕ್ತಸ್ರಾವ ಕೂಡ ಆಗಿತ್ತು. ಕೂಡಲೇ ಅವರನ್ನು ನಟ ಸುದೀಪ್ ಮನವಿ ಮೇರೆಗೆ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮೂಲಕ ರಕ್ತಸ್ರಾವವನ್ನು ಸರಿ ಮಾಡಲಾಗಿತ್ತು.
ಐಸಿಯುನಲ್ಲಿ ಇಂದು ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿ ಅವರು ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದರು. ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂಬುದಾಗಿಯೂ ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಅರುಣ್ ನಾಯ್ಕ್ ಮಾಹಿತಿ ವಿಜಯ್ ಕುಟುಂಬಕ್ಕೆ ತಿಳಿಸಿದ್ದಾರೆ.
ವಿಜಯ್ ಚಿಕಿತ್ಸೆಗೆ ಸ್ಪಂದಿಸದ ಕಾರಣ, ಗಂಭೀರ ಸ್ಥಿತಿಯನ್ನು ತಲುಪಿದ್ದ ಅವರ ಆರೋಗ್ಯ ಸ್ಥಿತಿಯ ಕುರಿತು ನಟ ನೀನಾಸಂ ಸತೀಶ್ ನನೆದು ಕಣ್ಣೀರಿಟ್ಟರು. ವಿಜಯಗ ಕುಟುಂಬಸ್ಥರು ನಟ ಸಂಚಾರಿ ವಿಜಯ್ ಅಂಗಾಗ ದಾನ ಮಾಡುವಂತ ನಿರ್ಧಾರವನ್ನು ಕೈಗೊಂಡಿರೋದಾಗಿ ಪ್ರಕಟಿಸಿದ್ದರು.
ಇದರ ಮಧ್ಯೆ ಸಂಚಾರಿ ವಿಜಯ್ ಅವರ ಮೆದುಳು ಕೆಲಸ ಮಾಡೋದನ್ನು ನಿಲ್ಲಿಸಿದೆ ಎಂಬುದಾಗಿ ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸುವ ಮೂಲಕ, ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದೆ ಎಂಬುದಾಗಿ ತಿಳಿಸಿದ್ದರು.
ಈ ಎಲ್ಲಾ ಮಾಹಿತಿಯ ನಂತರ, ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದ್ದಾರೆ. ಇದಕ್ಕೆ ಸ್ಯಾಂಡಲ್ ವುಡ್ ಹಲವರು ಕಂಬನಿ ಮಿಡಿದಿದ್ದಾರೆ.
[t4b-ticker]
+ There are no comments
Add yours