ಚಿತ್ರದುರ್ಗ, ಜೂನ್14:
ಇಆರ್ಎಂ ಸಮೂಹ ಸಂಸ್ಥೆ ವತಿಯಿಂದ ಜಿಲ್ಲೆಯ ಪತ್ರಕರ್ತರಿಗೆ ಹಾಗೂ ಪತ್ರಿಕಾ ವಿತರಕರಿಗೆ ಫೇಸ್ಶೀಲ್ಡ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಭವನದ ಮುಂಭಾಗ ಸೋಮವಾರ ಪತ್ರಕರ್ತರಿಗೂ ಹಾಗೂ ಪತ್ರಿಕಾ ವಿತರಕರಿಗೂ ಫೇಸ್ಶೀಲ್ಡ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲಾಯಿತು.
ಜಿಲ್ಲಾ ವಾರ್ತಾಧಿಕಾರಿ ಬಿ.ಧನಂಜಯ ಮಾತನಾಡಿ, ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಪತ್ರಕರ್ತರು ಮಾಹಿತಿಗಾಗಿ ಜನರೊಂದಿಗೆ ನಿತ್ಯ ಸಂಪರ್ಕದಲ್ಲಿರುತ್ತಾರೆ. ಹಾಗೂ ಪತ್ರಿಕಾ ವಿತರಕರು ಸಹ ಪ್ರತಿ ಮನೆಗೆ ಭೇಟಿ ನೀಡಿ ಪತ್ರಿಕೆಯನ್ನು ತಲುಪಿಸುವ ಕೆಲಸ ಮಾಡುವುದರಿಂದ ಇಂತಹ ಸಂದರ್ಭದಲ್ಲಿ ಸೋಂಕಿನಿಂದ ರಕ್ಷಣೆ ಪಡೆಯಲು ಫೇಸ್ಶೀಲ್ಡ್, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವುದು ಸೂಕ್ತವಾಗಿದ್ದು ಇಂತಹ ಸಂದರ್ಭದಲ್ಲಿ ಇಆರ್ಎಂ ಸಮೂಹ ಸಂಸ್ಥೆಯಿಂದ ನೆರವು ನೀಡುತ್ತಿರುವುದು ಶ್ಲಾಘನೀಯವಾದದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಆರ್ಎಂ ಸಮೂಹ ಸಂಸ್ಥೆ ವ್ಯವಸ್ಥಾಪಕ ದೀಪಕ್, ಗ್ರಾಮೀಣ ಸಹಾಯಕ ಜನರಲ್ ಮ್ಯಾನೇಜರ್ ರಣದೀವೆ, ಅಜಿತ್ ಸೇರಿದಂತೆ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರು ಇದ್ದರು.
[t4b-ticker]
+ There are no comments
Add yours