ಬೆಂಗಳೂರು, ಜೂ. 25: ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ. ಹೀಗಾಗಿ ರಾಜ್ಯದ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಮನವಿ ಮಾಡಿದ್ದಾರೆ.
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ವೈರಸ್ ಸಕ್ರಿಯವಾಗಿರುವ ಕಾರಣ, ಭಾರತದಲ್ಲಿ ಮತ್ತೆ ರೋಗ ಹರಡುವ ಸಾಧ್ಯತೆ ತಡೆಯಲು ಲಸಿಕೆ ಅತ್ಯಗತ್ಯ ಎಂದರು. ಭಾರತವು 140 ಕೋಟಿ ಜನಸಂಖ್ಯೆ, ವೈವಿಧ್ಯಮಯ ಪ್ರದೇಶಗಳು ಮತ್ತು ಸವಾಲುಗಳ ನಡುವೆಯೂ ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರೋತ್ಸಾಹ, ಆರೋಗ್ಯ ಇಲಾಖೆ, ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತರು, ಎನ್ಜಿಒಗಳು ಮತ್ತು ಶಿಕ್ಷಣ ಇಲಾಖೆಯ ಅವಿರತ ಶ್ರಮದಿಂದ ಸಾಧ್ಯವಾಗಿದೆ ಎಂದು ಹೇಳಿದರು. ಈ ಬಾರಿ ರಾಜ್ಯದಲ್ಲಿ ಸುಮಾರು 64.84 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ರಾಜ್ಯವನ್ನು ಪೋಲಿಯೋ ಮುಕ್ತವಾಗಿರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.



