ವೇಣೂರು: ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಶುರುವಾಗಿದೆ. ಅಲ್ಲಲ್ಲಿ ಕೆಲ ಗೊಂದಲ, ಗದ್ದಲಗಳ ನಡುವೆ ಎಸ್ಐಆರ್ ನಡೆದಿದೆ. ಇದರ ಮಧ್ಯೆ ಎಸ್ಐಆರ್ಗೆ ಅಂತ ಮತದಾರನ ಮನೆಗೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಮಾಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಳಿಬಂದಿದೆ. ಬಿಎಲ್ಒ ದಲಿತ ಎಂಬ ಕಾರಣಕ್ಕೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ ಮಾಡಿದ್ದು, ಈ ಸಂಬಂಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಅದರಂತೆ ಶಿರ್ಲಾಲು ಗ್ರಾಮದ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎಸ್ಐಆರ್ ಪ್ರಕ್ರಿಯೆಗೆಂದು ತೆರಳಿದ್ದರು. ಆದ್ರೆ, ಈ ವೇಳೆ ನಿಮ್ಮ ಜಾತಿಯವರು ಒಳಗೆ ಬರಬಾರದು ಎಂದು ಅಂಗಳದಲ್ಲೇ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಬಿಎಲ್.ಒ. ಆಗಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಕೆಲಸ ಮಾಡುತ್ತಿದ್ದು, ಜು.6 ರಂದು ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಎಂಬವರ ಮನೆಗೆ ಎ.ಎಲ್.ಒ ಮಾಧವ ಎಂಬರೊಂದಿಗೆ ತೆರಳಿದ್ದರು. ಈ ವೇಳೆ ಮನೆಯ ಅಂಗಳಕ್ಕೆ ಪ್ರವೇಶಿಸಿದಾಗ “ನೀನು ಅಲ್ಲಿಯೇ ನಿಲ್ಲು ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿದ ಮನೆಯ ಯಜಮಾನಿ ಯಶೋಧ ಆಚಾರಿ ಮನೆಯ ಸಿಟ್ ಔಟ್ ಗೆ ಪ್ರವೇಶಿಸದಂತೆ ಮೆಟ್ಟಿಲ ಬಳಿ ತಡೆದು ನಿಲ್ಲಿಸಿದ್ದಾರೆ. ಈ ರೀತಿ ಯಶೋಧ ಆಚಾರಿ ಅಪಮಾನ ಮಾಡಿ, ಜಾತಿ ನಿಂದನೆ ಮಾಡಿರುವುದಾಗಿ ಬಿಎಲ್.ಒ. ಜು.7 ರಂದು ಪೊಲೀಸ್ ದೂರು ನೀಡಿದ್ದಾರೆ.
ಬಿ.ಎಲ್.ಒ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಆರೋಪಿ ಯಶೋಧ ಆಚಾರಿ ವಿರುದ್ಧ SC/ST act-2015(u/s-3(1)(r),3(2)(va)) ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಈ ರೀತಿ ಎಸ್ಐಆರ್ ವೇಳೆ ಜಾತ ನಿಂದನೆ ಮಾಡಿದ ಆರೋಪ ವರದಿಯಾಗಿದ್ದು, ಇದೇ ಮೊದಲ ಪ್ರಕರಣವಾಗಿದೆ.



