ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಚಳ್ಳಕೆರೆ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಇಂದು ಚಳ್ಳಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಲಸಿಕಾ ಅಭಿಯಾನಕ್ಕೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟಿ.ರಘುಮೂರ್ತಿ ಅವರು ಚಾಲನೆ ನೀಡಿದರು.
ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಎಲ್ಲರೂ ತಪ್ಪದೇ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಡಗಿನ ಬಸವರಾಜರವರು ,ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಪ್ರೇಮಸುಧಾ ,ನಗರಸಭಾ ಆಯುಕ್ತರಾದ ಪಾಲಯ್ಯ ,ಬಿ ಇ ಒ ಸುರೇಶ ಪ್ರಾಂಶುಪಾಲರಾದ ರವೀಶ , ನಗರಸಭಾ ಅದ್ಯಕ್ಷ ರಾದ ಶ್ರೀ ಮತಿ ಸುಮಕ್ಕ ಅಂಜಿನಪ್ಪ ,ಉಪಾಧ್ಯಕ್ಷ ರಾದ ಜೈತುಂಬಿ ಮಾಲಿಕ್ ಸಾಬ್ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರಮೇಶಗೌಡ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
[t4b-ticker]
+ There are no comments
Add yours