ಸ್ಕೂಟಿಗೆ ಕ್ಯಾಂಟರ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು

 

 

 

 

ಚಿಕ್ಕಮಗಳೂರು: ಸ್ಕೂಟಿಗೆ ಕ್ಯಾಂಟರ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ.

ಚಿಕ್ಕಮಗಳೂರಿನ ನೆಹರು ನಗರ ನಿವಾಸಿ ಶಾಹಿದ್(28) ಮೃತ ದುರ್ದೈವಿ.

 

 

ಲಕ್ಯಾ ಕ್ರಾಸ್ ಬಳಿ ವೇಗವಾಗಿ ಬಂದ ಸ್ಕೂಟಿಗೆ ಕ್ಯಾಂಟರ್ ಡಿಕ್ಕಿಯಾಗಿದೆ.

ಅಪಘಾತದ ಭೀಕರತೆಗೆ ಶಾಹಿದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours