ಚಿತ್ರದುರ್ಗ: ಜಿಲ್ಲೆಗೆ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ ಪರಶುರಾಮ್ ಇವರನ್ನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ. ಮಂಜುನಾಥ್ ಹಾಗೂ ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿ ಮತ್ತು ನೌಕರರು ಭೇಟಿ ಮಾಡಿ ಶುಭ ಕೋರಿದರು. ಇನ್ನೂ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ನೀಡುವ ಸುಳ್ಳು ದೂರು ದಾಖಲೆಗಳನ್ನು ಮಾನ್ಯ ಮಾಡದೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಕೆ ಪರಶುರಾಮ್ ಅವರಿಗೆ ಮನವಿಯನ್ನ ಮಾಡಲಾಯಿತು. ಇನ್ನೂ ಈ ಸಂದರ್ಭದಲ್ಲಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಕೆ ಮಂಜುನಾಥ್, ಸಂಘಟನಾ ಕಾರ್ಯದರ್ಶಿಗಳಾದ ಸಣ್ಣ ನೀರಾವರಿ ಇಲಾಖೆಯ ಪ್ರಕಾಶ್, ಆರೋಗ್ಯ ಇಲಾಖೆಯ ಮುರಳಿಧರ್, ನ್ಯಾಯಾಂಗ ಇಲಾಖೆಯ ನಿರ್ದೇಶಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಿಧರ್, ಪೊಲೀಸ್ ಇಲಾಖೆಯ ನಿರ್ದೇಶಕರಾದ ಅನಿತಾ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಿಲ್ಲಾಧ್ಯಕ್ಷರಾದ ನಾಗರಾಜ ಕೆ, ಪ್ರಧಾನ ಕಾರ್ಯದರ್ಶಿಗಳಾದ ನಯಾಜ್ ಅಹಮದ್ ರಾಜ, ಗೌರವಾಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಬಿ.ಇ, ಜಿ.ಸಿ ಬಸವರಾಜ್, ಖಜಾಂಚಿ ಗಳಾದ ರಾಜು, ಕುಮಾರ್, ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ನೌಕರರಾದ ಬಸವರಾಜ್ ಮತ್ತು ದೇವರಾಜ್, ಹಾಗೂ ಇತರ ಇಲಾಖೆಗಳ ನೌಕರರು ಉಪಸ್ಥಿತರಿದ್ದರು.
[t4b-ticker]
+ There are no comments
Add yours